Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:15 - ಪರಿಶುದ್ದ ಬೈಬಲ್‌

15 ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವಮಂಜೂಷಕ್ಕೆ ಕೋಲುಗಳನ್ನು ಸಿಕ್ಕಿಸಿ ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ಆಜ್ಞಾಪಿಸಿದ ಯೆಹೋವ ದೇವರ ವಾಕ್ಯದ ಪ್ರಕಾರ ಲೇವಿಯರು ಕೋಲುಗಳನ್ನು ಹಾಕಿ, ದೇವರ ಮಂಜೂಷವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:15
12 ತಿಳಿವುಗಳ ಹೋಲಿಕೆ  

“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.


ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.


ಈ ಹೊರುವ ಕೋಲುಗಳು ಬಹಳ ಉದ್ದವಾಗಿದ್ದವು. ಮಹಾ ಪವಿತ್ರಸ್ಥಳದ ಎದುರಿನ ಪವಿತ್ರಸ್ಥಳದಲ್ಲಿ ನಿಂತುಕೊಳ್ಳುವ ಯಾವ ವ್ಯಕ್ತಿಯೇ ಆಗಲಿ ಈ ಕೋಲುಗಳ ತುದಿಯನ್ನು ಕಾಣಬಹುದಾಗಿತ್ತು. ಆದರೆ ಹೊರಗಿರುವ ಯಾರೂ ಅವುಗಳನ್ನು ನೋಡುವುದಕ್ಕಾಗುವುದಿಲ್ಲ. ಈ ಕೋಲುಗಳು ಇಂದಿಗೂ ಅಲ್ಲಿವೆ.


ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.


ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು