Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:18 - ಪರಿಶುದ್ದ ಬೈಬಲ್‌

18 ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:18
15 ತಿಳಿವುಗಳ ಹೋಲಿಕೆ  

ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್;


ಓಬೇದೆದೋಮನಿಗೆ ದಕ್ಷಿಣದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನ ಮಕ್ಕಳಿಗೆ ಬೆಲೆಬಾಳುವ ಸಾಮಾಗ್ರಿಗಳ ಉಗ್ರಾಣದ ಕೋಣೆಯನ್ನು ಕಾಯುವ ಕೆಲಸ ದೊರೆಯಿತು.


ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ಥ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.


ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.


ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು.


ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಇವರುಗಳು ಅಲಾಮೋತ್ ಹಾರ್ಪ್ ವಾದ್ಯಗಳನ್ನು ಬಾರಿಸಿದರು.


ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್, ಯೆಗೀಯೇಲ್ ಮತ್ತು ಅಜಜ್ಯ ಇವರುಗಳು ಶೆಮೀನೀತ್ ಹಾರ್ಪ್ ವಾದ್ಯಗಳನ್ನು ಬಾರಿಸಿದರು. ಇದು ಇವರ ಖಾಯಂ ಕೆಲಸವಾಗಿತ್ತು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.


ಇಷ್ಷೀಯನು ಮೀಕನ ಸೋದರ. ಇಷ್ಷೀಯನ ಮಗ ಜೆಕರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು