Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:29 - ಪರಿಶುದ್ದ ಬೈಬಲ್‌

29 ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:29
26 ತಿಳಿವುಗಳ ಹೋಲಿಕೆ  

ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ಕೆಲವರು ಅಪೊಸ್ತಲರನ್ನು ನೋಡಿ ನಗುತ್ತಾ, “ಇವರು ಅತಿಯಾಗಿ ದ್ರಾಕ್ಷಾರಸ ಕುಡಿದು ಮತ್ತರಾಗಿದ್ದಾರೆ” ಎಂದು ಹಾಸ್ಯಮಾಡಿದರು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.


ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.


ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಸೌಲನ ಮಗಳಾದ ಮೀಕಲಳೂ ದಾವೀದನ ಪತ್ನಿ. ಆದರೆ ಸೌಲನು ಅವಳನ್ನು ಗಲ್ಲೀಮ್‌ನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು