Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:4 - ಪರಿಶುದ್ದ ಬೈಬಲ್‌

4 ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಮಂಜೂಷದ ಮುಂದೆ ದೇವಾರಾಧನೆ ನಡಿಸುವದಕ್ಕೋಸ್ಕರ ದಾವೀದನು ಕೆಲವು ಮಂದಿ ಲೇವಿಯರನ್ನು ನೇವಿುಸಿದನು. ಇಸ್ರಾಯೇಲ್‍ದೇವರಾದ ಯೆಹೋವನನ್ನು ಸ್ತುತಿಸುವದೂ ಹಾಡಿ ಹರಸುವದೂ ಅವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:4
25 ತಿಳಿವುಗಳ ಹೋಲಿಕೆ  

ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಲಿ.


ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ. ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!


ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!


ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.


ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.


ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.


ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.


ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು