Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:12 - ಪರಿಶುದ್ದ ಬೈಬಲ್‌

12 ನಿನ್ನ ಮಗನು ನನಗೆ ಆಲಯವನ್ನು ಕಟ್ಟುವನು. ನಿನ್ನ ಮಗನ ವಂಶವು ಸದಾಕಾಲಕ್ಕೂ ಇಸ್ರೇಲ್ ಜನಾಂಗವನ್ನು ಆಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:12
21 ತಿಳಿವುಗಳ ಹೋಲಿಕೆ  

“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”


ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.


ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.


ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿಹೋಗುವದಿಲ್ಲ.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು