Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:2 - ಪರಿಶುದ್ದ ಬೈಬಲ್‌

2 ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:2
13 ತಿಳಿವುಗಳ ಹೋಲಿಕೆ  

ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ.


ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.


ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.


ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


“ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು.


ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.


ಆದರೆ ಆ ರಾತ್ರಿ ದೇವರ ಮಾತು ನಾತಾನನಿಗೆ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು