Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:17 - ಪರಿಶುದ್ದ ಬೈಬಲ್‌

17 ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:17
14 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.


ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.


ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.


ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.


ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.


ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು