Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:4 - ಪರಿಶುದ್ದ ಬೈಬಲ್‌

4 ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:4
14 ತಿಳಿವುಗಳ ಹೋಲಿಕೆ  

ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.


ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.


ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.


ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.


ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


“ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು.


ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.


ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜೆರಿಕೊ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು