Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:23 - ಪರಿಶುದ್ದ ಬೈಬಲ್‌

23 ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಗೆಷೂರ್ಯರೂ ಅರಾಮ್ಯರೂ ಯಾಯೀರನ ಸಂತಾನದವರಿಂದ ಯಾಯೀರನ ಗ್ರಾಮಗಳನ್ನೂ ಕೆನತ್ ಪ್ರಾಂತದ ಗ್ರಾಮಗಳನ್ನೂ ಒಟ್ಟು ಅರುವತ್ತು ಸ್ಥಾನಗಳನ್ನು ಕಿತ್ತುಕೊಂಡರು. ಈ ಸ್ಥಾನಗಳವರೆಲ್ಲರೂ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಗೋತ್ರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:23
9 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಗೆಷೂರಿಗೆ ಓಡಿಹೋದ ನಂತರ, ಅಲ್ಲಿ ಅವನು ಮೂರು ವರ್ಷಗಳ ಕಾಲ ನೆಲೆಸಿದನು.


ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.


ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.


ಸೆಗೂಬನು ಯಾಯೀರನ ತಂದೆ. ಇವನಿಗೆ ಗಿಲ್ಯಾದ್ ಪ್ರಾಂತ್ಯದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.


(ಹೆಚ್ರೋನನ ಹೆಂಡತಿ ಅಬೀಯ.) ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಹೂರ್ ಎಂಬ ಮಗನನ್ನು ಹೆತ್ತಳು. ಅಷ್ಹೂರನು ತೆಕೋವನ ತಂದೆ.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು