Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:29 - ಪರಿಶುದ್ದ ಬೈಬಲ್‌

29 ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೂ ದಾವೀದನು ಯೆಹೋವದೂತನ ಕತ್ತಿಗೆ ಹೆದರಿ ದೇವದರ್ಶನಕ್ಕೋಸ್ಕರ ಅಲ್ಲಿಗೆ ಹೋಗಲಾರದೆ ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:29
7 ತಿಳಿವುಗಳ ಹೋಲಿಕೆ  

ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.


ಸೊಲೊಮೋನನು ಗಿಬ್ಯೋನಿನಲ್ಲಿ ಆರಾಧನಾಸ್ಥಳಕ್ಕೆ ಹೋದನು. ಬಳಿಕ ಅವನು ದೇವದರ್ಶನ ಗುಡಾರದಿಂದ ಜೆರುಸಲೇಮಿಗೆ ಹಿಂದಿರುಗಿ ಇಸ್ರೇಲಿನ ಮೇಲೆ ರಾಜ್ಯಭಾರವನ್ನು ಮಾಡತೊಡಗಿದನು.


ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು.


ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು