Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:2 - ಪರಿಶುದ್ದ ಬೈಬಲ್‌

2 ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:2
16 ತಿಳಿವುಗಳ ಹೋಲಿಕೆ  

ಆಮೇಲೆ ಸೊಲೊಮೋನನು ತನ್ನ ರಾಜ್ಯದಲ್ಲಿದ್ದ ಎಲ್ಲಾ ಪರದೇಶಸ್ಥರನ್ನು ಲೆಕ್ಕಿಸಿದನು. ಸೊಲೊಮೋನನ ತಂದೆಯಾದ ದಾವೀದನು ಮಾಡಿದ ಜನಗಣತಿಯ ನಂತರ ಈ ಜನಗಣತಿಯನ್ನು ಮಾಡಲಾಯಿತು. ಅವರಲ್ಲಿ ಒಂದು ಲಕ್ಷದ ಐವತ್ತ ಮೂರು ಸಾವಿರದ ಆರುನೂರು ಮಂದಿ ಪರದೇಶದವರಿದ್ದರು.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.


ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.


ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು