Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:8 - ಪರಿಶುದ್ದ ಬೈಬಲ್‌

8 ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಯೆಹೋವನು ನನಗೆ - ನೀನು ಬಹಳ ರಕ್ತವನ್ನು ಸುರಿಸಿದವನೂ ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:8
9 ತಿಳಿವುಗಳ ಹೋಲಿಕೆ  

ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.


“ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”


ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.


ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.


ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು