Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:1 - ಪರಿಶುದ್ದ ಬೈಬಲ್‌

1 ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:1
12 ತಿಳಿವುಗಳ ಹೋಲಿಕೆ  

ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.


ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.


ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.


ಅಂದು ನಾನು ನಿನಗೆ ಮಾಡಿದ ಪ್ರಮಾಣವನ್ನು ಇಂದು ಪೂರೈಸುತ್ತೇನೆ. ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ನಾನು ನಿನಗೆ ಆ ಪ್ರಮಾಣವನ್ನು ಮಾಡಿದ್ದೆನು. ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನೆಂದೂ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ನಿನಗೆ ಪ್ರಮಾಣ ಮಾಡಿದ್ದೆನು. ನಾನು ನನ್ನ ವಾಗ್ದಾನವನ್ನು ಈಡೇರಿಸುತ್ತೇನೆ” ಎಂದು ಹೇಳಿದನು.


ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಈಗ ಸೊಲೊಮೋನನು ತನ್ನ ತಂದೆಯ ಸಿಂಹಾಸನದ ಮೇಲೆ ಕುಳಿತು ಆಡಳಿತ ನಡೆಸತೊಡಗಿದನು. ರಾಜ್ಯವು ಅವನ ಪೂರ್ಣ ಹತೋಟಿಯಲ್ಲಿ ಇತ್ತು.


ದಾವೀದನು ರಾಜ್ಯದ ಎಲ್ಲಾ ಮುಖಂಡರುಗಳನ್ನೂ ಯಾಜಕರನ್ನೂ ಲೇವಿಯರನ್ನೂ ಕರೆದನು.


ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು