ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.