Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:28 - ಪರಿಶುದ್ದ ಬೈಬಲ್‌

28 ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:28
28 ತಿಳಿವುಗಳ ಹೋಲಿಕೆ  

ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.


ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಿನ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.


ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)


ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”


ದಾವೀದನು ಸೊಲೊಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು.


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.


ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.


ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.


ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.


ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.


ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.


ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ಆದರೆ ನಾನು ನನ್ನ ಆಲಯದಲ್ಲಿ ಸೇವೆಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಬೇಕಾದ ಸೇವೆಯನ್ನು ಮಾಡುವರು.


ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು