Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:29 - ಪರಿಶುದ್ದ ಬೈಬಲ್‌

29 ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:29
16 ತಿಳಿವುಗಳ ಹೋಲಿಕೆ  

ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.


ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.


ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.


ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.


ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.


ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು