Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:30 - ಪರಿಶುದ್ದ ಬೈಬಲ್‌

30 ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30-31 ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:30
19 ತಿಳಿವುಗಳ ಹೋಲಿಕೆ  

ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.


ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.


ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.


ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.


ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು