Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:5 - ಪರಿಶುದ್ದ ಬೈಬಲ್‌

5 ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಧಿಕಾರಿಗಳನ್ನಾಗಿ ಆರು ಸಾವಿರ ಮಂದಿಯನ್ನೂ ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಮಂದಿಯನ್ನೂ ತಾನು ಸಿದ್ಧಮಾಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವದಕ್ಕಾಗಿ ನಾಲ್ಕು ಸಾವಿರ ಮಂದಿಯನ್ನೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:5
23 ತಿಳಿವುಗಳ ಹೋಲಿಕೆ  

ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.


ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.


ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.


ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.


ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.


ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.


ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.


ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು.


ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು.


ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು