Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:6 - ಪರಿಶುದ್ದ ಬೈಬಲ್‌

6 ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:6
17 ತಿಳಿವುಗಳ ಹೋಲಿಕೆ  

ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.


ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ.


ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.


ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು.


ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.


ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು), ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ).


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


(ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು