Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:8 - ಪರಿಶುದ್ದ ಬೈಬಲ್‌

8 ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:8
13 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಶುಪ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು. ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.


ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು.


ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.


ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಆಸಾಫನ ಸಂತತಿಯಲ್ಲಿ: ಜಕ್ಕೂರ್, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು