Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:20 - ಪರಿಶುದ್ದ ಬೈಬಲ್‌

20 ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:20
21 ತಿಳಿವುಗಳ ಹೋಲಿಕೆ  

ಯೆಹೀಯೇಲೀಯ ಗಂಡುಮಕ್ಕಳು: ಜೀತಾಮ್ ಮತ್ತು ಅವನ ತಮ್ಮನಾದ ಯೋವೇಲ. ಇವರು ಸಹ ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಗಳಾಗಿದ್ದರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.


ಶೆಬೂವೇಲನು ದೇವಾಲಯದ ಅಮೂಲ್ಯ ವಸ್ತುಗಳಿಗೆ ಅಧಿಕಾರಿಯಾಗಿದ್ದನು. ಇವನು ಗೇರ್ಷೋಮನ ಮಗ. ಗೇರ್ಷೋಮನು ಮೋಶೆಯ ಮಗ.


ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.


ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಅಂಗಳಕ್ಕೆ ಹೋಗುವ ದಾರಿಯನ್ನು ಕಾಯಲು ಇಬ್ಬರು ಕಾವಲುಗಾರರಿದ್ದರು. ಹೀಗೆ ಇವರೆಲ್ಲಾ ದ್ವಾರಪಾಲಕರ ತಂಡಗಳು. ಇವರು ಕೋರಹ ಮತ್ತು ಮೆರಾರೀಯ ವಂಶದವರು.


ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು.


ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”


ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.


ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು