Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:29 - ಪರಿಶುದ್ದ ಬೈಬಲ್‌

29 ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:29
11 ತಿಳಿವುಗಳ ಹೋಲಿಕೆ  

ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.)


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


ಇವರಲ್ಲದೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರ ಕುಲಗಳಿಂದ ಬೇರೆ ನಾಯಕರನ್ನು ಆರಿಸಿಕೊಂಡರು.


ಕೆಹಾತನಿಗೆ ನಾಲ್ಕು ಮಂದಿ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.


“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.


ಲೇವಿಕುಲದ ಯಾಜಕರ ಬಳಿಗೂ ಅಲ್ಲಿ ಆ ಸಮಯದಲ್ಲಿರುವ ನ್ಯಾಯಾಧೀಶನ ಬಳಿಗೂ ಹೋಗಿ ಅವರಿಗೆ ವಿಷಯವನ್ನು ತಿಳಿಸಬೇಕು. ಅವರು ನಿಮ್ಮ ಮುಂದಿರುವ ಬಗೆಹರಿಯಲಾಗದ ಪ್ರಕರಣವನ್ನು ಆಲೈಸಿ, ವಿಚಾರಿಸಿ,


ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರ್ಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು