Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:12 - ಪರಿಶುದ್ದ ಬೈಬಲ್‌

12 ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:12
16 ತಿಳಿವುಗಳ ಹೋಲಿಕೆ  

ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.


ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ಹಿಜ್ಕೀಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು.


ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು.


ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.


“ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.


ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.


ಆ ಬಳಿಕ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟನು. ದೇವಾಲಯ ಮತ್ತು ಅದರ ಮಂಟಪ, ಉಗ್ರಾಣದ ಕೋಣೆಗಳು, ಮೇಲುಪ್ಪರಿಗೆ, ಒಳಗಿನ ಕೋಣೆಗಳು ಮತ್ತು ಕೃಪಾಸನದ ಮಂದಿರದ ನಕ್ಷೆಗಳನ್ನು ಕೊಟ್ಟನು.


ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.


“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು