Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:14 - ಪರಿಶುದ್ದ ಬೈಬಲ್‌

14 ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆರಾಧನೆಯ ಎಲ್ಲಾ ಸಾಮಗ್ರಿಗಳು ಇವುಗಳ ವಿಷಯವಾಗಿಯೂ ತಾನು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:14
5 ತಿಳಿವುಗಳ ಹೋಲಿಕೆ  

ದಾವೀದನು ಸೊಲೊಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು.


ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ಈ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು.


ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.


ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು