1 ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.
1 ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
1 ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!
1 ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ;
1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.
ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.
ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.
ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”
“ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.
ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.
ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.