Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:11 - ಪರಿಶುದ್ದ ಬೈಬಲ್‌

11 ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:11
51 ತಿಳಿವುಗಳ ಹೋಲಿಕೆ  

ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.


ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.


ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.


ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.


ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.


ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.


ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.


ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು