Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:16 - ಪರಿಶುದ್ದ ಬೈಬಲ್‌

16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:16
8 ತಿಳಿವುಗಳ ಹೋಲಿಕೆ  

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು