Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:21 - ಪರಿಶುದ್ದ ಬೈಬಲ್‌

21 ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:21
7 ತಿಳಿವುಗಳ ಹೋಲಿಕೆ  

ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.


ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು