Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:10 - ಪರಿಶುದ್ದ ಬೈಬಲ್‌

10 ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:10
56 ತಿಳಿವುಗಳ ಹೋಲಿಕೆ  

ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ನಾನು ನಿನ್ನ ನಿಯಮಗಳನ್ನು ಅನುಸರಿಸಲು ನಿರ್ಧರಿಸಿರುವುದರಿಂದ ಕೈಚಾಚಿ ಸಹಾಯಮಾಡು.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರ ಕೊಡುವನು.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.


ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.


ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.


ಆ ಪುರುಷನು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನನ್ನ ಹೆಸರು ಯಾಕೋಬ” ಅಂದನು.


ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು.


ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು