Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:22 - ಪರಿಶುದ್ದ ಬೈಬಲ್‌

22 ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:22
11 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಚೋಫೈ ಎಲ್ಕಾನನ ಮಗನು. ನಹತನು ಚೋಫೈಯ ಮಗನು.


ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.


ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.


“ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. ಆದರೆ ಗಾದನು ಅವರನ್ನು ಓಡಿಸಿ ಬಿಡುವನು.”


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು