Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:4 - ಪರಿಶುದ್ದ ಬೈಬಲ್‌

4 ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ಕು ಜನ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲಿಯಾಜರನು ಫೀನೆಹಾಸನನ್ನು ಪಡೆದನು, ಫೀನೆಹಾಸನು ಅಬೀಷೂವನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:4
21 ತಿಳಿವುಗಳ ಹೋಲಿಕೆ  

ಇವರು ಆರೋನನ ಗಂಡುಮಕ್ಕಳು: ಎಲ್ಲಾಜಾರನು ಆರೋನನ ಮಗ. ಫೀನೆಹಾಸನು ಎಲ್ಲಾಜಾರನ ಮಗ. ಅಬೀಷೂವನು ಫೀನೆಹಾಸನ ಮಗ.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.


ಫೀನೆಹಾಸನ ಸಂತತಿಯವರಲ್ಲಿ ಗೇರ್ಷೋಮ್; ಈತಾಮಾರನ ಸಂತತಿಯವರಲ್ಲಿ ದಾನಿಯೇಲನು; ದಾವೀದನ ಸಂತತಿಯವರಲ್ಲಿ ಹಟ್ಟೂಷ್;


ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.


ಮೆರಾರೀಯ ಸಂತತಿಯ ಮಹ್ಲೀ, ಮೂಷೀ ಮತ್ತು ಯಾಜ್ಯ.


ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು