Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:60 - ಪರಿಶುದ್ದ ಬೈಬಲ್‌

60 ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:60
12 ತಿಳಿವುಗಳ ಹೋಲಿಕೆ  

ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ಬಾತ್‌ಗಲ್ಲೀಮ್‌ನವರೇ, ಚೀರಾಡಿರಿ! ಲಯೆಷವೇ, ಕಿವಿಗೊಡು. ಅನಾತೋತೇ, ನನಗೆ ಉತ್ತರಕೊಡು!


ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ.


ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.


ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.


ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.


ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು