Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:21 - ಪರಿಶುದ್ದ ಬೈಬಲ್‌

21 ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನ ಮಗನು ಜಾಬಾದ್; ಇವನ ಮಕ್ಕಳು - ಶೂತೆಲಹ, ಎಜೆರ್, ಎಲ್ಲಾದ್ ಎಂಬವರು. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದದರಿಂದ ಆ ದೇಶದ ಮೂಲನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:21
6 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್.


ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು