Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:11 - ಪರಿಶುದ್ದ ಬೈಬಲ್‌

11 ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕೀನ್, ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆದ ಅಜರ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:11
17 ತಿಳಿವುಗಳ ಹೋಲಿಕೆ  

ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು.


ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,


ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.


ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”


ದೇವದರ್ಶನಗುಡಾರಕ್ಕೋಸ್ಕರ ಮತ್ತು ತಮ್ಮ ಕಾವಲಿನ ಕರ್ತವ್ಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಕನಾಗಿರಬೇಕು.”


ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು