Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:31 - ಪರಿಶುದ್ದ ಬೈಬಲ್‌

31 ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ರೊಟ್ಟಿಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:31
10 ತಿಳಿವುಗಳ ಹೋಲಿಕೆ  

ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.


ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.


ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.


ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು.


ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ನೀವು ಬಾಂಡ್ಲಿಯಲ್ಲಿ ಪಕ್ವಮಾಡಿದ ಪದಾರ್ಥವನ್ನು ಅರ್ಪಿಸಿದರೆ, ಅದು ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟಿನಿಂದ ಮಾಡಿದ್ದಾಗಿರಬೇಕು.


ನಿಮ್ಮ ಧಾನ್ಯನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು.


ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.


ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.


“ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು