Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:33 - ಪರಿಶುದ್ದ ಬೈಬಲ್‌

33 ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ವಾದ್ಯಗಾರರ ಪಟ್ಟಿ. ಅವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳೂ ಕೆಲಸದಲ್ಲಿರುತ್ತಿದ್ದದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:33
12 ತಿಳಿವುಗಳ ಹೋಲಿಕೆ  

ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು), ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ).


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.


(ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)


“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು