Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:13 - ಪರಿಶುದ್ದ ಬೈಬಲ್‌

13 ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚೆಸಾಟ್ನಿ ತುಮ್ಚೊ ಶಾನೆಪಾನಾಚೊ ಪಟ್ಟೊ ಭಾಂದುನ್ ಘೆವ್ನ್ ಜಾಗೆ ರಾವಾ, ಜೆಜು ಕ್ರಿಸ್ತ್ ದಿಸ್ತಲ್ಯಾ ಯೆಳಾರ್ ತುಮ್ಕಾ ಗಾವ್ನರ್ ಹಾಯ್ ತ್ಯಾ ಕುರ್ಪೆಚ್ಯಾ ದೆನ್ಗಿಯಾಂಚ್ಯಾ ವರ್ತಿ ಸಗ್ಳೊ ಬರೊಸೊ ಥವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:13
35 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


“ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.


ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.


ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


“ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೊ! ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.


ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.


ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.


ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು