Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:17 - ಪರಿಶುದ್ದ ಬೈಬಲ್‌

17 ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಂಚ್ಯಾ ತೆಂಚ್ಯಾ ಕರ್ನ್ಯಾಂಚ್ಯಾ ಸಾರ್ಕೆ ತಿರ್ಮಾನ್ ಕರ್ತಲ್ಯಾ ದೆವಾಕ್ ತುಮಿ ಬಾಬಾ ಮನುನ್ ಬಲ್ವುಲ್ಯಾಸಿ, ತಸೆ ಹೊಲ್ಯಾರ್, ಹ್ಯಾ ಭಾಯ್ಲ್ಯಾ ಗಾಂವಾತ್ ತುಮಿ ತುಮ್ಚೆ ಭಕ್ತಿಚೆ ಅನಿ ದೆವಸ್ಪಾನಾಚೆ ಜಿವನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:17
33 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.


ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ.


ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.


ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ಆದ್ದರಿಂದ ಯಾವಾಗಲೂ ಧೈರ್ಯದಿಂದಿದ್ದೇವೆ. ಈ ದೇಹದಲ್ಲಿ ವಾಸವಾಗಿರುವ ತನಕ ಪ್ರಭುವಿನಿಂದ ದೂರವಾಗಿರುತ್ತೇವೆಂಬುದು ನಮಗೆ ತಿಳಿದಿದೆ.


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.


ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು