Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:23 - ಪರಿಶುದ್ದ ಬೈಬಲ್‌

23 ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್, ಶ್ವಾಸಾತ್ ಝಿತ್ತೊ ರಾತಲ್ಯಾ ದೆವಾಚ್ಯಾ ಗೊಸ್ಟಿಚ್ಯಾ ವೈನಾ ತುಮ್ಕಾ ನ್ಹವೊ ಜಲಮ್ ಗಾವ್ಲಾ, ಹ್ಯೊ ಜಲಮ್ ತುಮ್ಕಾ ನಾಸ್ ಹೊವ್ನ್ ಜಾತಲ್ಯಾ ಮಾನ್ಸಾಕ್ನಾ ನ್ಹಯ್, ನಾಸ್ ಹೊವ್ನ್ ಜಾಯ್ ನಸಲ್ಲ್ಯಾ ದೆವಾಕ್ನಾ ಗಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:23
18 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ಇವರು ರಕ್ತದಿಂದಾಗಲಿ ಕಾಮದಿಂದಾಗಲಿ ಪುರುಷನ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ. ಇವರು ದೇವರಿಂದಲೇ ಹುಟ್ಟಿದವರು.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪಗಳಲ್ಲಿ ನೆಲೆಗೊಂಡಿರುವುದಿಲ್ಲ. ಏಕೆಂದರೆ ದೇವರು ದಯಪಾಲಿಸಿದ ಹೊಸ ಜೀವವು ಅವನಲ್ಲಿ ನೆಲೆಸಿರುತ್ತದೆ. ಅವನು ದೇವರಿಂದ ಹೊಸದಾಗಿ ಹುಟ್ಟಿದ ಕಾರಣ ಪಾಪದಲ್ಲೇ ಮುಂದುವರಿಯಲು ಅವನಿಗೆ ಸಾಧ್ಯವಿಲ್ಲ.


ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.” ನಿಮಗೆ ಈ ವಾಕ್ಯವನ್ನೇ ತಿಳಿಸಲಾಯಿತು.


ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.


ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.


“ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.


“ಈ ಸಾಮ್ಯದ ಅರ್ಥ ಹೀಗಿದೆ: ಬೀಜವು ದೇವರ ವಾಕ್ಯ.


ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗವು ನೆಡುವುದಕ್ಕೆ ಇಟ್ಟಿರುವ ಬೀಜದ ಮೇಲೆ ಬಿದ್ದರೂ ಆ ಬೀಜ ಶುದ್ಧವಾಗಿಯೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು