Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:8 - ಪರಿಶುದ್ದ ಬೈಬಲ್‌

8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕ್ರಿಸ್ತಾಕ್ ತುಮಿ ಬಗುಕನ್ಯಾಶಿ ಹೊಲ್ಯಾರ್ಬಿ ತುಮಿ ತೆಚೊ ಪ್ರೆಮ್ ಕರ್ತ್ಯಾಸಿ, ಅನಿ ಅತ್ತಾಬಿ ತೊ ತುಮ್ಕಾ ದಿಸಿನಾ ಹೊಲಾ ಹೊಲ್ಯಾರ್ಬಿ ತೆಚೆ ವರ್ತಿ ವಿಶ್ವಾಸ್ ಥವ್ನ್ ಮಹಿಮೆನ್ ಭರಲ್ಲ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಕುಶಿನಿ ತುಮಿ ಭರ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:8
37 ತಿಳಿವುಗಳ ಹೋಲಿಕೆ  

ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು.


ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.


ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.


ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ವರ್ಣಿಸಲಸಾಧ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?


ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?


ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು