Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:1 - ಪರಿಶುದ್ದ ಬೈಬಲ್‌

1 ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೆಚೆಸಾಟ್ನಿ ಸಗ್ಳ್ಯಾ ರಿತಿಚೆ ಬುರ್ಶೆಪಾನ್, ಹಾಟ್ಮಾರಿಪಾನ್, ಕುಶ್ಡೆಪಾನ್ ಇರ್ಸ್ಯಾ, ಢೊಂಗ್ ಅನಿ ಸಗ್ಳ್ಯಾ ರಿತಿಚೆ ವಾಯ್ಟ್ ಬೊಲ್ನೆ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:1
50 ತಿಳಿವುಗಳ ಹೋಲಿಕೆ  

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.


ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.


“ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”


ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.


ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.


ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.


ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.


ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.


ಈ ಜನರು ಸುಳ್ಳುಗಾರರಾಗಿರಲಿಲ್ಲ. ಇವರು ನಿರ್ದೋಷಿಗಳಾಗಿದ್ದರು.


ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.


ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.


ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು