Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:11 - ಪರಿಶುದ್ದ ಬೈಬಲ್‌

11 ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜ್ಯಾ ಪ್ರೆಮಾಚ್ಯಾನು ಮಿಯಾ ತುಮ್ಕಾ ವಿನಂತಿ ಕರ್ತಾ ತುಮಿ ಹ್ಯಾ ಜಗಾತ್ ಪರ್ವಾಸಾಕ್ ಯೆಲ್ಲೆ ಅನಿ ದುಸ್ರ್ಯಾ ದೆಶಾಚೆ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ತುಮ್ಕಾಚ್ ತುಮಿ ತುಮ್ಚ್ಯಾ ಆಂಗಾಚ್ಯಾ ಆಶಾಕ್ನಿ ಸೊಡುನ್ ದಿವ್ ನಕಾಸಿ ತಿ ಕನ್ನಾಬಿ ಆತ್ಮ್ಯಾಚ್ಯಾ ವಿರೊದ್ ಝಡ್ಗುನ್ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:11
35 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.


ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ ಹಾಡುಗಳಾಗಿವೆ.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.


ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.


ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.


ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.


ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು