Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:19 - ಪರಿಶುದ್ದ ಬೈಬಲ್‌

19 ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ಕಾಯ್ಬಿ ಚುಕ್ ನಸ್ತಾನಾ ತಿಯಾ ಕಸ್ಟ್ ಸೊಸುನ್ ಘೆತಲೆ ಹೊಲ್ಲ್ಯಾರ್ ದೆವ್ ತೆಚೆಸಾಟ್ನಿ ತುಕಾ ಆಶಿರ್ವಾದ್ ದಿತಾ. ದೆವಾಚಿ ಇಚ್ಚ್ಯಾ ಕಾಯ್ ಮನುನ್ ತಿಯಾ ಕಳ್ವುನ್ ಘೆಟಲ್ಲೊ ಎಕ್ಲೊ ಮಾನುಸ್ ಕಾಯ್ ಚುಕ್ ಕರಿಸ್ತಾನಾ ತರಾಸಾತ್ ಪಡುನ್ ತೊ ತರಾಸ್ ಸೊಸುನ್ ಘೆಟ್ಲ್ಯಾರ್ ದೆವಾಕ್ನಾ ಶಬಾಸ್ಕಿ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:19
18 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


“ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ!


ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


“ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.


ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು