Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:14 - ಪರಿಶುದ್ದ ಬೈಬಲ್‌

14 ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮಿ ಕ್ರಿಸ್ತಾಚ್ಯಾ ನಾವಾನ್ ಚಲ್ತಲೆ ತೆಜ್ಯಾಸಾಟಿ ಅವ್ಮಾನ್ ತುಮ್ಕಾ ಸೊಸುಕ್ ಗಾವ್ಲ್ಯಾರ್ ತುಮ್ಚೆ ನಸಿಬ್ ಕವ್ಡೆ ಬರೆ, ದೆವಾಚ್ಯಾ ಮಹಿಮೆನ್ ಭರಲ್ಲೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರುಲ್ಲಾ ಮನುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:14
37 ತಿಳಿವುಗಳ ಹೋಲಿಕೆ  

ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.


ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!


ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು