Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:15 - ಪರಿಶುದ್ದ ಬೈಬಲ್‌

15 ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಚ್ಯಾತ್ಲೊ ಕೊನ್ ಬಿ ಖುನಿಗಾರ್, ಚೊರ್, ಅಪರಾದಿ, ನಾಹೊಲ್ಯಾರ್ ದುಸ್ರ್ಯಾ ಲೊಕಾಂಚ್ಯಾ ಕಾಮಾಕ್ನಿ ಮದ್ದಿ ಪಡ್ತಲ್ಯಾಂಚ್ಯಾ ತರಾಸ್ ಸೊಸ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:15
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ.


ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು