Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:4 - ಪರಿಶುದ್ದ ಬೈಬಲ್‌

4 ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಬುರ್ಶಿ ಅನಿ ಉಪೆಗಾಕ್ ನಸಲ್ಲಿ ಗೊಸ್ಟಿಯಾ ಬೊಲಿನಸಲ್ಲೆ ಬಗಲಿ ದೆವಾಚೆರ್ ವಿಶ್ವಾಸ್ ನಸಲ್ಲಿ ಲೊಕಾ ತುಮ್ಚ್ಯಾ ವಿಶಯಾತ್ ಅಜಾಪ್ ಹೊತಾತ್, ತಸೆ ಹೊವ್ನ್ ತೆನಿ ತುಮ್ಚ್ಯಾ ವಿಶಯಾತ್ ಬುರ್ಶಿ ಸಂಗ್ತಿಯಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:4
11 ತಿಳಿವುಗಳ ಹೋಲಿಕೆ  

ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು