Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:4 - ಪರಿಶುದ್ದ ಬೈಬಲ್‌

4 ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮೊಟೊ ಕುರ್ಬುರ್ ದಿಲ್ಲ್ಯಾ ತನ್ನಾ ತೊ ತುಮಿ ಮಹಿಮೆನ್ ಭರಲೊ ಮುಕುಟ್ ಜೊಡುನ್ಗೆತ್ಯಾಸಿ, ತೆಜೊ ಪ್ರಜ್ವಳ್ ಕನ್ನಾಚ್ ಕಮ್ಮಿ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:4
22 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು