Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:2 - ಪರಿಶುದ್ದ ಬೈಬಲ್‌

2 ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಶಾಶ್ವತ್ ಜಿವ್ ಅಮ್ಕಾ ದಿಸ್ಲೊ. ದೆವ್ ಬಾಬಾಚ್ಯಾ ವಾಂಗ್ಡಾ ಹೊತ್ತ್ಯಾ ತ್ಯಾ ಜಿವಾಚ್ಯಾ ವಚನಾಕ್ ಅಮಿ ಬಗಟಲ್ಲ್ಯಾಸಾಟ್ನಿ, ತೆಚ್ಯಾ ವಿಶಯಾತ್ ಸಾಕ್ಷಿ ದಿತಾಂವ್ ಅನಿ ತುಮ್ಕಾ ಸಾಂಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:2
37 ತಿಳಿವುಗಳ ಹೋಲಿಕೆ  

ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.


ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.


ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೋ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಹೇಳಿದನು.


ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


(ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ದೇವರಾತ್ಮವನ್ನು ನೀವು ಇದೇ ರೀತಿ ತಿಳಿದುಕೊಳ್ಳಲು ಸಾಧ್ಯ. “ಈ ಲೋಕಕ್ಕೆ ಮನುಷ್ಯನಾಗಿ ಬಂದ ಯೇಸುವೇ ಕ್ರಿಸ್ತನೆಂದು ನಾನು ನಂಬುತ್ತೇನೆ” ಎಂದು ಹೇಳುವ ಆತ್ಮವು ದೇವರಿಂದ ಬಂದದ್ದಾಗಿದೆ.


ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು