Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:25 - ಪರಿಶುದ್ದ ಬೈಬಲ್‌

25 ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕ್ರಿಸ್ತಾನ್ ಅಮ್ಕಾ ದಿಲ್ಲಿ ಗೊಸ್ಟ್ ಕಾಯ್ ಮಟ್ಲ್ಯಾರ್, ಕನ್ನಾಚ್ ಮರಾನ್ ನಸಲ್ಲೆ ಜಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:25
25 ತಿಳಿವುಗಳ ಹೋಲಿಕೆ  

ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು