Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:28 - ಪರಿಶುದ್ದ ಬೈಬಲ್‌

28 ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾಜ್ಯಾ ಪ್ರೆಮಾಚ್ಯಾ ಪೊರಾನು, ಅತ್ತಾ ತುಮಿ ತೆಚ್ಯಾ ವಾಂಗ್ಡಾ ರ್‍ಹಾವ್ಕ್ ಜಾಯ್,ಅಸೆ ತೊ ದಿಸ್ತಲ್ಲ್ಯಾ ದಿಸಾ ತೆಚ್ಯಾಕ್ನಾ ಲಜುನ್ ಧುರ್ ಜಾತಲ್ಯಾ ಬದ್ಲಾಕ್ ವಿಶ್ವಾಸಾನ್ ತೆಚೆಕ್ಡೆ ಜಾವ್ಕ್ ಪಾವ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:28
29 ತಿಳಿವುಗಳ ಹೋಲಿಕೆ  

ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.


ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು